ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
Cross references
ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ