ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
Cross references
ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?
ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.
ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?