ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
Cross references
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.