ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
Cross references
ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;
ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.