ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
Cross references
ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.