ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
Cross references
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.
ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.