ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
Cross references
ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು.
ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;