ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
Cross references
ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.
ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ
ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.
ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು.
ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.