ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
Cross references
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು.
ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.