ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
Cross references
ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.
ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.
ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.
ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.