ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
Cross references
ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.
ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.