ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
Cross references
ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.
ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;