ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?
Cross references
ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?
ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.