ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
Cross references
ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು.
ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.
ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.