ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
Cross references
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--
ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.
ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.