ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.
Cross references
ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು.
ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.
ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.
ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?
ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.
ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.