ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.
Cross references
ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.