ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.
Cross references
ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.
ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.