ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
Cross references
ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.