ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
Cross references
ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.
ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.
ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.