ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
Cross references
ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.