ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.
Cross references
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?