ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
Cross references
ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ.
ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.