ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
Cross references
ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.
ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.