Home Bibles 1 ದಿನವೃತ್ತಾಂತ 21:7 · ಕನ್ನಡ ಬೈಬಲ್
1 ದಿನವೃತ್ತಾಂತ 21:7 · ಕನ್ನಡ ಬೈಬಲ್

ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.

Cross references

ಯೆಹೋಶುವ 7:1

ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.

ಯೆಹೋಶುವ 7:5

ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.

ಯೆಹೋಶುವ 7:13

ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್‌ ಕರ್ತನಾದ ದೇವರು ಹೇಳುತ್ತಾನೆ.

ಯೆಹೋಶುವ 22:16

ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್‌ ದೇವರಿಗೆ ಮಾಡಿದ ಈ ಅಪರಾಧವೇನು?

2 ಸಮುವೇಲ 11:27

ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.

2 ಸಮುವೇಲ 21:1

ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.

2 ಸಮುವೇಲ 21:14

ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.

2 ಸಮುವೇಲ 24:1

ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.

2 ಸಮುವೇಲ 24:10

ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.

1 ಅರಸುಗಳು 15:5

ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.

1 ದಿನವೃತ್ತಾಂತ 21:14

ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.

Interlinear

Choose Theme