ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
Cross references
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?
ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.