ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
Cross references
ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ,
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.