ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
Cross references
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.
ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ
ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.