ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
Cross references
ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.
ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.
ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.
ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.