ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
Cross references
ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
ಕರ್ತನು ಇಸ್ರಾಯೇಲ್ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.