ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
Cross references
ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.