ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
Cross references
ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.
ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.