ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
Cross references
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.
ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು
ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.