ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.