ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
Cross references
ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ
ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.
ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.
ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.