ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು.
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.
ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.
ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.