ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
Cross references
ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.
ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?