ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.
Cross references
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.