ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
Cross references
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ