Home Bibles 1 ದಿನವೃತ್ತಾಂತ 7:21 · ಕನ್ನಡ ಬೈಬಲ್
1 ದಿನವೃತ್ತಾಂತ 7:21 · ಕನ್ನಡ ಬೈಬಲ್

ಇವನ ಮಗನು ಜಾಬಾದನು; ಇವನ ಮಕ್ಕಳು --ಶೂತೆಲಹನು ಎಜೆರನೂ ಎಲ್ಲಾದನೂ. ಆ ದೇಶ ದಲ್ಲಿ ಹುಟ್ಟಿದ ಗತ್‌ನವರು ಇವರ ದನಗಳನ್ನು ಸುಲು ಕೊಳ್ಳಲು ಇಳಿದು ಬಂದಾಗ ಇವರನ್ನು ಕೊಂದು ಹಾಕಿದರು.

Cross references

1 ಸಮುವೇಲ 5:8

ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್‌ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್‌ ದೇವರ ಮಂಜೂಷವು ಗತ್‌ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್‌ ದೇವರ ಮಂಜೂಷವನ್ನು ಗತ್‌ಗೆ ಒಯ್ದರು.

1 ಸಮುವೇಲ 5:10

ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್‌ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.

ಯೆಹೆಜ್ಕೇಲ 25:15

ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.

ಯೋಹಾನ 11:19

ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು.

Interlinear

Choose Theme