ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Cross references
ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.
ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,
ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೊಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು;