ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
Cross references
ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.