ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
Cross references
ಆಗ ಒಬ್ಬನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.