ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
Cross references
ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು.
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,