ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
Cross references
ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು.
ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.