ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
Cross references
ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.