ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
Cross references
ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?
ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.
ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
ಪ್ರವಾದನೆಗಳನ್ನು ಹೀನೈಸಬೇಡಿರಿ;
ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;