ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
Cross references
ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ