ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
Cross references
ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ.
ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,
ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.