ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
Cross references
(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?
ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.
ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.
ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ?
ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.
ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.